April 14, 2025

ಜೆಡಿಎಸ್ ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎಂಬುದಕ್ಕೆ ಉಪಚುನಾವಣೆ ಫಲಿತಾಂಶ ಸಾಕ್ಷಿ: ಝಮೀರ್ ಅಹಮದ್ ಖಾನ್

0

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎಂಬುದಕ್ಕೆ ಉಪ ಚುನಾವಣೆ ಫಲಿತಾಂಶ ಸಾಕ್ಷಿ. ಎರಡೂ ಕಡೆ ಠೇವಣಿ ಕಳೆದುಕೊಂಡಿದ್ದಾರೆ. ಹಾನಗಲ್ ನಲ್ಲಿ ಪಕ್ಷೇತರ ಅಭ್ಯರ್ಥಿಗಿಂತ ಕಡಿಮೆ ಮತ ಜೆಡಿಎಸ್ ಗೆ ಬಂದಿದೆ. ಕಾಂಗ್ರೆಸ್ ನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಆಗಿದ್ದ ಮುಖಂಡನನ್ನು ಕರೆದುಕೊಂಡು ಹೋಗಿ ನಿಲ್ಲಿಸಿ ಆತನ ನಾಯಕತ್ವ ಹಾಳು ಮಾಡಿದರು ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ಉಪ ಚುನಾವಣೆ ಫಲಿತಾಂಶದ ಕುರಿತಾಗಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ ನಡೆಸಿತ್ತು. ಸಿದ್ದರಾಮಯ್ಯ, ಡಿ. ಕೆ.ಶಿವಕುಮಾರ್ ಸೇರಿ ಎಲ್ಲ ನಾಯಕರೂ ಶ್ರಮ ಹಾಕಿದರು ಎಂದರು.

 

 

Leave a Reply

Your email address will not be published. Required fields are marked *

You may have missed

error: Content is protected !!