ಎಸ್ಯುವಿ, ಟ್ರ್ಯಾಕ್ಟರ್ ಅಪಘಾತ: ಮದುವೆಗೆ ತೆರಳುತ್ತಿದ್ದ 6 ಮಂದಿ ಮೃತ್ಯು, ಮೂವರು ಗಾಯ
ಬಲರಾಮ್ಪುರ್: ಎಸ್ಯುವಿ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮದುವೆಗೆ ತೆರಳುತ್ತಿದ್ದ 6 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ತುಳಸಿಪುರ ಮತ್ತು ಬರ್ಹಾನಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತರು ಗಸಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣಪುರದಿಂದ ಭಗವಾನ್ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಶುಕ್ರವಾರ ತಡರಾತ್ರಿ ಗನ್ವಾರಿಯಾ ಬಳಿ ಅಪಘಾತ ಸಂಭವಿಸಿದೆ ಎಂದು ಬಲರಾಮಪುರದ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಕ್ಸೇನಾ ತಿಳಿಸಿದ್ದಾರೆ.
ಹಿಂಬದಿಯಲ್ಲಿ ಬರುತ್ತಿದ್ದ ಜೀಪ್ ಕೂಡ ಎಸ್ಯುವಿಗೆ ಡಿಕ್ಕಿ ಹೊಡೆದಿದೆ ಎಂದು ಎಸ್ಪಿ ಹೇಳಿದ್ದಾರೆ.




