ಬೈಂದೂರು: ಮೀನುಗಾರಿಕೆಗೆ ತೆರಳಿದ್ದ ದೋಣಿ ಸಮುದ್ರದ ಅಲೆಗೆ ಸಿಲುಕಿ ಮುಳುಗಡೆ: ಎಲ್ಲಾ ಮೀನುಗಾರರ ರಕ್ಷಣೆ
ಬೈಂದೂರು: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗೆ ಸಿಲುಕಿ ಮುಳುಗಡೆಯಾದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ ಐದು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ಶಿರೂರು ನಾಖುದಾ ಮೊಹಲ್ಲದಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಬೀಬಿ ಆಮೀನಾ (𝙸𝙽𝙳-𝙺𝙰-03-𝙼𝙾-3937) ಎಂಬ ದೋಣಿಯು ಸಮುದ್ರದ ಅಲೆಗೆ ಸಿಲುಕಿ ಮುಳುಗಿದೆ.
ಮೀನುಗಾರರಾದ ಸದ್ಕೆ ಮುಷ್ತಾಕ್, ರೋಗೆ ಅಬೂಬಕ್ಕರ್, ಭೋಂಬಾ ಮೀರಾ, ದಾಂಡಯ್ಯ ಅಶ್ರಫ್, ಬೋಡರ್ನಿ ಶಬ್ಬೀರ್ ಎಂಬವರನ್ನು ರಕ್ಷಣೆ ಮಾಡಲಾಗಿದೆ.




