December 16, 2025

ತುರ್ತು ಚಿಕಿತ್ಸೆ ಸಿಗದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರಳಾಡಿದ ಗರ್ಭಿಣಿ

0
image_editor_output_image-2036062740-1653385624165.jpg

ವಿಜಯಪುರ: ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯ ಕಾರಣಕ್ಕೆ ಗರ್ಭಿಣಿಯೊಬ್ಬರು ತುರ್ತು ಚಿಕಿತ್ಸೆ ಚಿಕಿತ್ಸೆ ಸಿಗದೆ ನರಳಾಡಿದ ಘಟನೆ ಜಿಲ್ಲೆಯ ಜಿಗಜೀವಣಗಿ ಗ್ರಾಮದಲ್ಲಿ ಜರುಗಿದೆ.

ಚಡಚಣ ತಾಲೂಕಿನ ಜಿಗಜೀವಣಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದ ಕಾರಣ ಹೆರಿಗೆ ನೋವು ಕಾಣಿಸಿಕೊಂಡು, ಆಸ್ಪತ್ರೆಗೆ ಆಗಮಿಸಿದ್ದ ಗರ್ಭಿಣಿ ಚಿಕಿತ್ಸೆ ಸಿಗದೆ ನೆಲದಲ್ಲಿ ಕುಳತು ನರಳಾಟ ನಡೆಸಿದ್ದಾರೆ.

ತುಂಬು ಗರ್ಭಿಣಿ ಪೂರ್ಣಿಮಾ ಹೊನಕಾಂಡೆ ಎಂಬಾಕೆ ಆಸ್ಪತ್ರೆಯ ನೆಲದಲ್ಲಿ ಕುಳಿತು ಗರ್ಭಿಣಿ ನರಳಾಡಿದರೂ ವೈದ್ಯರು-ಸಿಬ್ಬಂದಿ ಆಸ್ಪತ್ರೆಗೆ ಆಗಮಿಸಿಲ್ಲ. ಸೋಮವಾರ ಮಧ್ಯಾಹ್ನವೇ ಗರ್ಭಿಣಿ ಪೂರ್ಣಿಮಾ ಹೆರಿಗೆ ನೋವಿನಿಂದ ನರಳಿದರೂ ಸ್ಪಂದಿಸದ ಕಾರಣ ರಾತ್ರಿ ವೇಳೆ ಆಕೆಯ ಪೋಷಕರು ಚಡಚಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!