March 26, 2026

ಮಡಿಕೇರಿ: ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರು ಮೃತ್ಯು

0
Screenshot_2022-05-29-17-50-04-18.png

ಮಡಿಕೇರಿ: ಮುಕ್ಕೋಡ್ಲು ಗ್ರಾಮದ ಕೋಟೆ ಅಬ್ಬಿಯಲ್ಲಿ ಈಜಲು ಹೋದ ಮೂವರು ಪ್ರವಾಸಿಗರು ನೀರು ಪಾಲಾಗಿರುವ ಘಟನೆ ಭಾನುವಾರ ನಡೆದಿದೆ.

ಮೃತರನ್ನು ತೆಲಂಗಾಣ ಮೂಲದ 16, 18 ಮತ್ತು 36 ವರ್ಷದ ವ್ಯಕ್ತಿಗಳು ಎನ್ನಲಾಗಿದೆ.

ಪ್ರವಾಸಕ್ಕೆಂದು ತೆಲಂಗಾಣದಿಂದ ಕೊಡಗಿಗೆ ಆಗಮಿಸಿದ್ದ ಪ್ರವಾಸಿಗರ ತಂಡ ಕುಶಾಲನಗರದ ಹೋಂ ಸ್ಟೇಯಲ್ಲಿ ತಂಗಿದ್ದರು. ಇಂದು (ಭಾನುವಾರ) ಕೋಟೆ ಅಬ್ಬಿಗೆ ಬಂದಿದ್ದು ಈ ವೇಳೆ ಸ್ನಾನಕ್ಕೆಂದು ನೀರಿಗೆ ಇಳಿದಿದ್ದಾರೆ ಈ ವೇಳೆ ಮೂವರು ನೀರುಪಾಲಾಗಿದ್ದಾರೆ, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರಕ್ಷಣಾ ತಂಡ ಮೂವರ ದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಮೂವರ ಉಸಿರು ನಿಂತ್ತಿತ್ತು.

ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!