ಚಿಕ್ಕಮಗಳೂರು: ಅಕ್ರಮ ಮತಾಂತರ ಆರೋಪ: ಬಜರಂಗದಳ ಕಾರ್ಯಕರ್ತರಿಂದ ದಾಳಿ

ಚಿಕ್ಕಮಗಳೂರು: ಅಕ್ರಮವಾಗಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಖಾಸಗಿ ಹೋಟೆಲ್ ಮೇಲೆ ದಾಳಿ ನಡೆಸಿರುವ ಘಟನೆ ಭಾನುವಾರ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮತಾಂತರ ಸಂಬಂಧ ಚರ್ಚೊಂದರ ಪಾದ್ರಿಗಳು ಹಾಗೂ ನೂರಾರು ಜನರು ಸಭೆ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು, ಈ ವೇಳೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಏಕಾಏಕಿ ದಾಳಿ ನಡೆಸಿದ್ದರಿಂದ ಅಲ್ಲಿದ್ದವರು ಗಾಬರಿಗೊಂಡಿದ್ದು, ಅನುಮತಿ ಇಲ್ಲದೆ ಸಭೆ ನಡೆಸಲಾಗುತ್ತಿದೆ. ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಕಾರ್ಯಕರ್ತರು, ಗ್ರಾಮೀಣ ಭಾಗದ ಜನರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡಲಾಗುತ್ತಿದೆ ಆರೋಪಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಅನುಮತಿ ಇಲ್ಲದೆ ಸಭೆ ನಡೆಸಲಾಗುತ್ತಿದೆ. ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.