September 20, 2024

ಮಂಗಳೂರಿನ ಹಲಸು ಮೇಳಕ್ಕೆ ಬಂದಿದ್ದ ವ್ಯಾಪಾರಿಗಳಿಬ್ಬರು ಸಮುದ್ರಪಾಲು

0

ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ಇಬ್ಬರು ಸಮುದ್ರಪಾಲಾದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ(40) ಹಾಗೂ ನಿಂಗಪ್ಪ (65) ಸಾವನ್ನಪ್ಪಿದವರು.

ನಗರದಲ್ಲಿ ಎರಡು ದಿನಗಳ ಕಾಲ ನಡೆದ ಹಲಸಿನ ಮೇಳಕ್ಕೆ ವ್ಯಾಪಾರ ಮಾಡಲು ಆಗಮಿಸಿದ ಇಬ್ಬರು ವ್ಯಾಪಾರಿಗಳು ಪಣಂಬೂರು ಬೀಚ್​​ನಲ್ಲಿ ಸಮುದ್ರ ತೀರಕ್ಕೆ ತೆರಳಿದ್ದ ಸಂದರ್ಭ ಅವಘಡ ನಡೆದಿದೆ.

ಮೈಸೂರಿನ ಅಗ್ರಹಾರದಲ್ಲಿರುವ ಫುಡ್ ಆ್ಯಂಡ್ ಬೇವರೇಜಸ್ ಫ್ಯಾಕ್ಟರಿ ನಡೆಸುತ್ತಿದ್ದ ದಿವಾಕರ ಆರಾಧ್ಯ ಎಂಬುವರು ಇತರರೊಂದಿಗೆ ಮಂಗಳೂರು ನಗರದಲ್ಲಿ ಮೇ 27ರಿಂದ 29ವರೆಗೆ ನಡೆದ ಹಲಸು ಮೇಳದಲ್ಲಿ ಭಾಗವಹಿಸಲು ಬಂದಿದ್ದರು. ನಿನ್ನೆ ಸಂಜೆಯವರೆಗೆ ಹಲಸು ಮೇಳದಲ್ಲಿ ವ್ಯಾಪಾರ ಮಾಡಿದ್ದ ಇವರು ಇಂದು (ಸೋಮವಾರ) ಮುಂಜಾನೆ 7 ಗಂಟೆಗೆ ಪಣಂಬೂರು ಬೀಚ್​ಗೆ ತೆರಳಿದ್ದರು. ಇವರೆಲ್ಲರೂ ಸಮುದ್ರದಲ್ಲಿ ಮೋಜು ಮಾಡುವ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿದ್ದಾರೆ. ಆಗ ದಿವಾಕರ ಆರಾಧ್ಯ(40) ಹಾಗೂ ನಿಂಗಪ್ಪ (65) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇತರ ಇಬ್ಬರನ್ನು ರಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!