ಬಿಜೆಪಿಯ ನಾಯಕಿಯಿಂದ ಪ್ರವಾದಿ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾನ್ಪುರದಲ್ಲಿ ಗಲಭೆ
ಕಾನ್ಪುರ: ಉತ್ತರ ಪ್ರದೇಶದ ಬಿಜೆಪಿಯ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಹೇಳಲಾಗಿದ್ದು ಈ ವಿಚಾರದ ಕಾರಣಕ್ಕೆ ಕಾನ್ಪುರದಲ್ಲಿ ಶುಕ್ರವಾರ ರಾತ್ರಿ ಗಲಭೆ ನಡೆದಿದೆ.
ಟಿವಿಯಲ್ಲಿ ಮೂಡಿಬಂದ ಚರ್ಚೆಯೊಂದರಲ್ಲಿ, ನೂಪುರ್ ಶರ್ಮಾರ ಹೇಳಿಕೆಯನ್ನು ಖಂಡಿಸಿದ ಸ್ಥಳೀಯ ಮುಸ್ಲಿಂ ಸಂಘಟನೆಯೊಂದು, ಕಾನ್ಪುರದ ಅತೀ ದೊಡ್ಡ ಸಗಟು ವ್ಯಾಪಾರ ಮಾರುಕಟ್ಟೆಯಾದ ಪರೇಡ್ ಮಾರ್ಕೆಟನ್ನು ಮುಚ್ಚುವಂತೆ ಕರೆ ನೀಡಿತ್ತು.
ಇದರ ನಡುವೆಯೇ ಪರೇಡ್ ಚೌಕ್ನಲ್ಲಿ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 18 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂರು ಎಫ್ಐಆರ್ಗಳನ್ನು ದಾಖಲಿಸಲಾಗಿದ್ದು, ಇದರಲ್ಲಿ 40 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದ್ದು, ಇನ್ನೂ 1,000 ಜನರನ್ನು ಗುರುತಿಸಬೇಕಾಗಿದೆ.