March 26, 2026

ಬೆಳ್ತಂಗಡಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

0
image_editor_output_image1075891073-1654418136488.jpg

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಬಕಾರಿ ಇಲಾಖೆ ಅಧಿಕಾರಿಗಳು ಕರ್ತವ್ಯದಲ್ಲಿದ್ದಾಗ ಘಟನೆ ಬೆಳಕಿಗೆ ಬಂದಿದ್ದು ಆರೋಪಿಗಳಾದ ತೌಸಿಕ್ ಮತ್ತು ರಫೀಕ್ ಎಂಬವರನ್ನು ಬಂಧಿಸಿ 41.530 ಗ್ರಾಂ. ಗಾಂಜಾ ವಶಕ್ಕೆ ಪಡೆಯಲಾಗಿದೆ.

ಅಬಕಾರಿ ಉಪ ನಿರೀಕ್ಷಕರು ಬೆಳ್ತಂಗಡಿ ವಲಯದಲ್ಲಿ ಪ್ರಕರಣ ದಾಖಲಿಸಿ, ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈ ವೇಳೆ ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಹಾಗೂ ಬೆಳ್ತಂಗಡಿ ವಲಯದ ಅಧಿಕಾರಿಗಳು, ಸಿಬ್ಬಂದಿ ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!