ಸುಳ್ಯ: ಗೋದಾಮು ಕಟ್ಟಡಕ್ಕೆ ಬೆಂಕಿ: ವೃದ್ಧ ಸಜೀವ ದಹನ; ಆತ್ಮಹತ್ಯೆ ಶಂಕೆ!
ಸುಳ್ಯ: ಗೋದಾಮು ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ ವೃದ್ಧ ಕೃಷಿಕರೋರ್ವರು ಸಜೀವ ದಹನವಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಬಳಿಯ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಮೃತ ದುರ್ದೈವಿ. ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ದಾಸ್ತಾನಿರಿಸಿದ್ದ ಕಟ್ಟಡಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗುತ್ತಿದ್ದು, ವೃದ್ಧನ ಸಂಪೂರ್ಣ ಸುಟ್ಟ ಮೃತದೇಹ ಅವುಗಳೆಡೆ ಕಂಡುಬಂದಿದೆ.

ಘಟನೆಯನ್ನು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




