ಕೆಪಿಸಿಸಿ ಸಂಯೋಜಕ ನಂದಕುಮಾರ್ ರವರಿಗೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ
ಕಡಬ: ಕೆಪಿಸಿಸಿ ಸಂಯೋಜಕ ನಂದಕುಮಾರ್ ರವರಿಗೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ನೆಲ್ಯಾಡಿ ಗ್ರಾಮದ ಪಡ್ಡಡ್ಕ ಎಂಬಲ್ಲಿ 4 ಲಕ್ಷದ ಅನುದಾನದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಿ ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿ ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಬಂದ ಸಂದರ್ಭ ಪಕ್ಷದ ಮುಖಂಡರು ಕಾರ್ಯಕರ್ತರು ಇವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನೆಲ್ಯಾಡಿ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು,ಕಡಬ ಬ್ಲಾಕಿನ ಮಾಜಿ ಅಧ್ಯಕ್ಷರುಗಳು, ತಾಲೂಕು ಪಂಚಾಯತ್ ಸದಸ್ಯರು,ನೆಲ್ಯಾಡಿ ವಲಯ ಅಧ್ಯಕ್ಷರು, ಮೊದಲಾದವರು ಉಪಸ್ಥಿತರಿದ್ದರು.




