ವಿಟ್ಲ: ಹಿಂದೂ ಸಮಾವೇಶದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅವಹೇಳನ: ರಾಧಾಕೃಷ್ಣ ಅಡ್ಯಂತಾಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು
ವಿಟ್ಲ: ವಿಟ್ಲದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಇಸ್ಲಾಂ ಧರ್ಮದ ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎಂದು ಆರೋಪಿ ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ವಿಟ್ಲದ ಸುನ್ನೀ ಕೋಆರ್ಡಿನೇಶನ್ ಸಮಿತಿ ವತಿಯಿಂದ ವಿಟ್ಲ ಎಸೈ ಮಂಜುನಾಥ ಅವರಿಗೆ ದೂರು ಸಲ್ಲಿಸಿದೆ.
ಸೋಮವಾರ ವಿಟ್ಲದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾದ ಹಿಂದೂ ಜನಜಾಗೃತಿ ಸಮಾವೇಶದಲ್ಲಿ ರಾಧಾಕೃಷ್ಣ ಅಡ್ಯಂತಾಯ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಧರ್ಮವನ್ನು ನಿಂದಿಸಿದ್ದರು. ಈತನ ವಿರುದ್ಧ ಫೋಲಿಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.




