March 26, 2026

ಚಾರ್ಮಾಡಿಯಲ್ಲಿ ಟ್ರಕ್ ಮೈಮೇಲೆ ಹರಿದು ಯುವಕ ನಝೀರ್ ಮೇಗಿನಮನೆ ಸ್ಥಳದಲ್ಲೇ ಮೃತ್ಯು

0
image_editor_output_image2075850544-1654658149033

ಬೆಳ್ತಂಗಡಿ: ಚಾರ್ಮಾಡಿ ಪಾಂಡಿಕಟ್ಟೆ ಎಂಬಲ್ಲಿ ಬೈಕ್‌ಗಳ ಮಧ್ಯೆ ನಡೆದ ಅಪಘಾತದ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಸ್ಥಳೀಯ ಇಪ್ಪತ್ತೊಂದರ ಹರೆಯದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾತ್ರಿ ವೇಳೆ ನಡೆದಿದೆ.

ಮೃತ ಯುವಕ ಚಾರ್ಮಾಡಿ ಮೇಗಿನಮನೆ ಇಸ್ಮಾಯಿಲ್ ಅವರ ಪುತ್ರ ನಝೀರ್ ಎಂದು ಗುರುತಿಸಲಾಗಿದೆ.

ಚಾರ್ಮಾಡಿ ಸಮೀಪ ತನ್ನ ಸ್ನೇಹಿತನ ಮನೆಗೆಂದು ತೆರಳಿ ಹಿಂದಿರುಗುತ್ತಿದ್ದ ವೇಳೆ ಎದುರು ಬದಿಯಿಂದ ಬರುತ್ತಿದ್ದ ಬೈಕ್ ಗೆ ಇವರು ಪ್ರಯಾಣಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದ್ದು, ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಅವರ ಮೇಲೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಹರಿದು ಈ ಅವಘಡ ಸಂಭವಿಸಿದೆ.
ಅಪಘಾತದ ವಿವರ ಅರಿಯುತ್ತಿದ್ದಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದರು. ವಿವರ ಅರಿತ ಬೆಳ್ತಂಗಡಿ ಸಂಚಾರಿ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಅಗತ್ಯ ಕಾನೂನು ಕ್ರಮ ಜರುಗಿಸಿದ್ದಾರೆ.

ನಝೀರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!