ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಸಿಬ್ಬಂದಿ ಮೇಲೆ ಮಚ್ಚು ಬೀಸಿದ ಪುಂಡರು; ಶಾಕಿಂಗ್ ಘಟನೆ
ಬೆಂಗಳೂರು: ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪುಂಡರ ತಂಡ ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿದ ಘಟನೆ ಬೆಂಗಳೂರಿನ ಬ್ಯಾಟರಾಯಪುರದಲ್ಲಿ ನಡೆದಿದೆ.
ಉದಯ್, ಕಿರಣ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳು ಪೆಟ್ರೋಲ್ ಹಾಕಿಸಿ ಜೂನ್ 2ರ ರಾತ್ರಿ 9.30ರ ಸುಮಾರಿಗೆ ಬಂಕ್ನಲ್ಲಿ ಮಚ್ಚು ಬೀಸಿ ಪರಾರಿಯಾಗಿದ್ದರು.
ಬಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಂಕ್ ಸಿಬ್ಬಂದಿ ನೀಡಿದ್ದ ದೂರಿನನ್ವಯ ಇದೀಗ ಇಬ್ಬರು ಆರೋಪಿಗಳ ಬಂಧನವಾಗಿದೆ.




