ಕಡಬ: ಚಲಿಸುತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ಮರ
ಕಡಬ: ಚಲಿಸುತ್ತಿದ್ದ ಬಸ್ ಮೇಲೆಯೇ ರಸ್ತೆ ಬದಿಯ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ಜೂ.12 ರಂದು ನಡೆದಿದೆ.
ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕ.ರಾ.ಸಾ.ಸಂ. ಬಸ್ ನ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ವಿಪರಿತ ಮಳೆಯೂ ಸುರಿಯುತ್ತಿದ್ದು, ಈ ಮಳೆಗೆ ಅಪಾಯಕಾರಿಯಾಗಿರುವ ಮರಗಳು ಉರುಳಿದೆ ಎಂದು ಹೇಳಲಾಗುತ್ತಿದೆ.




