ಬೈಕಂಪಾಡಿಯ ರೌಡಿ ರಾಜಾ ಕೊಲೆ ಪ್ರಕರಣ: ಪ್ರಮುಖ ಆರೋಪಿ ನವೀನ್ ಬಂಧನ
ಮಂಗಳೂರು: ಬೈಕಂಪಾಡಿಯ ಮೀನಕಳಿಯ ರಸ್ತೆ ಬದಿಯಲ್ಲಿ ರೌಡಿ ಶೀಟರ್ ರಾಜಾ ಯಾನೆ ರಾಘವೇಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಯಾನೆ ಮೈಕಲ್ ನವೀನನ್ನು ಪೊಲೀಸರು ಬುಧವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ರೌಡಿ ಶೀಟರ್ ರಾಜಾ ಯಾನೆ ರಾಘವೇಂದ್ರ
ಈತನ ವಿರುದ್ದ ಮೂರು ಕೊಲೆ ಪ್ರಕರಣ ಸೇರಿದಂತೆ ಒಟ್ಟು 8 ಕ್ರಿಮಿನಲ್ ಪ್ರಕರಣಗಳಿವೆ.
ರಾಜಾನ್ ಕೊಲೆಗೆ ಪ್ರಮುಖ ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.




