August 25, 2026

ಪಡುಬಿದ್ರಿ ಜಂಕ್ಷನ್‌ನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಲಾರಿ ಹರಿದು ವ್ಯಕ್ತಿ ಮೃತ್ಯು

0
image_editor_output_image1342898968-1655357637947.jpg

ಪಡುಬಿದ್ರಿ: ಕಾರ್ಕಳ – ಪಡುಬಿದ್ರಿ ಜಂಕ್ಷನ್‌ನಲ್ಲಿ ರಸ್ತೆ ದಾಟಲು ಹೆದ್ದಾರಿ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರ ಮೇಲೆ ಲಾರಿಯ ಚಕ್ರ ಹರಿದು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಸಾಂತೂರು ಗ್ರಾಮದ ನಿವಾಸಿ, ಬಡಗಿ ಕೆಲಸ ಮಾಡುತ್ತಿದ್ದ ಜಯರಾಮ ಆಚಾರ್ಯ (51) ಎಂದು ಗುರುತಿಸಲಾಗಿದೆ.

ಪಡುಬಿದ್ರಿಯ ಕಾರ್ಕಳ ಜಂಕ್ಷನ್ ಬಳಿ ರಸ್ತೆ ದಾಟಲು ನಿಂತಿದ್ದ ಜಯರಾಮ ಅವರ ಮೇಲೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದು, ಸೊಂಟದ ಮೇಲೆ ಲಾರಿಯ ಚಕ್ರ ಚಲಿಸಿತ್ತು.

ತೀವ್ರ ಗಾಯಗೊಂಡ ಅವರನ್ನು ಉಡುಪಿ ಸರ್ಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!