ದೇವಾಲಯಗಳ ನವೀಕರಣಕ್ಕಾಗಿ ಸರಕಾರದ ಹಣದಿಂದಲೇ ವಿವಿಧ ಯೋಜನೆಗಳ ಜಾರಿ: ಯೋಗಿ ಆದಿತ್ಯನಾಥ್
ಅಯೋಧ್ಯೆ: ಬಿಜೆಪಿ ಆಡಳಿತದಲ್ಲಿ ದೇವಾಲಯಗಳ ನವೀಕರಣಕ್ಕಾಗಿ ಹಣವನ್ನು ಬಳಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ಕುರಿತು ಮಾತನಾದಿದ ಅವರು, ದೇವಸ್ಥಾನಗಳ ನವೀಕರಣಕ್ಕಾಗಿ ಹಣವನ್ನು ಖರ್ಚು ಮಾಡಲಾಗುತ್ತಿದೆ” ಎಂದರು.
ಕೊರೊನಾ ಸಮಯದಲ್ಲಿ ಬಡವರಿಗೆ ಉಚಿತ ಪಡಿತರವನ್ನು ಒದಗಿಸಲು ಹೊರತಂದಿರುವ ಯೋಜನೆಯು ಈ ವರ್ಷದ ನವೆಂಬರ್ನಲ್ಲಿ ಮುಕ್ತಾಯಗೊಳ್ಳಲಿತ್ತು. ಆದರೆ ನಮ್ಮ ಸರ್ಕಾರವು ಅದನ್ನು ಮುಂದಿನ ವರ್ಷ ಹೋಳಿ (ಮಾರ್ಚ್) ವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದಿದ್ದಾರೆ.
ಇನ್ನು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಉತ್ತರ ಪ್ರದೇಶದ 500 ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ನವೀಕರಣಕ್ಕಾಗಿ ಕೇಂದ್ರ ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಅವರು ಹೇಳಿದರು.




