September 19, 2024

ಎಸ್ಡಿಪಿಐ ತಲಪಾಡಿ ವತಿಯಿಂದ ಎಸೆಸೆಲ್ಸಿ, ಪಿಯುಸಿ, ಮದ್ರಸ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

0

ಬಂಟ್ವಾಳ :ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತಲಪಾಡಿ ಬೂತ್ ಸಮಿತಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ 2021-22 ನೇ ಸಾಲಿನ SSLC, PUC, ಹಾಗೂ ಮದ್ರಸದ ಪಬ್ಲಿಕ್ ಪರೀಕ್ಷೆಯಲ್ಲಿ ಶೈಕ್ಷಣಿಕ ಸಾಧನೆಗೈದ ತಲಪಾಡಿಯ 28 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ
ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಾಗಾರವು ಅಲ್ ಖಝನ ಸಮುದಾಯ ಭವನ ತಲಪಾಡಿಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಬದ್ರಿಯಾ ಜುಮಾ ಮಸೀದಿ ತಲಪಾಡಿ ಇದರ ಖತೀಬರಾದ ಝುಬೈರ್ ಫೈಝಿ , ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಎಸ್ ಹೆಚ್,ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ಕೆಸಿ ರೋಡ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಮುನೀಷ್ ಆಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ತಲಪಾಡಿ ಬೂತ್ ಸಮಿತಿ ಅಧ್ಯಕ್ಷರಾದ ಲತೀಫ್ ಬಿ ಸಿ ವಹಿಸಿದ್ದರು, ಕಾರ್ಯಕ್ರಮದ ಉದ್ಘಾಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ ನೆರವೇರಿಸಿದರು.

ತರಬೇತಿದಾರರಾಗಿ ಆಗಮಿಸಿದ ಅಬ್ದುಲ್ ಖಾದರ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು, ಬದ್ರಿಯಾ ಜುಮಾ ಮಸೀದಿ ತಲಪಾಡಿ ಅಧ್ಯಕ್ಷರಾದ ಇದ್ದಿನಬ್ಬ ಕರ್ನಾಟಕ, ಹಿರಿಯ ಸಮಾಜ ಸೇವಕರಾದ ರಾಮಣ್ಣ ಶೆಟ್ಟಿ, ಎಸ್ ಡಿ ಟಿ ಯು ಬಂಟ್ವಾಳ ತಾಲೂಕು ಅಧ್ಯಕ್ಷರಾದ ಮುಸ್ತಾಕ್ ಬಿಎಂ, ಬದ್ರಿಯಾ ಜುಮಾ ಮಸೀದಿ ತಲಪಾಡಿ ಉಪಾಧ್ಯಕ್ಷರಾದ ನಾಸಿರ್ ಟಿ ಎಚ್, ಬೈಕಂಡಿ ಚಿಕನ್ ಸ್ಟಾಲ್ ಮಾಲಕರಾದ ಅಮೀರ್ ಹಂಝ ಯುವ ಉದ್ಯಮಿ ಸವಾಜ್ ತಲಪಾಡಿ, ಎಸ್ ಡಿ ಪಿ ಐ ಕುಮೇರು ಬೂತ್ ಅಧ್ಯಕ್ಷರಾದ ಆಸಿಫ್ ಆರ್ ಕೆ ಮತ್ತಿತರರು ಉಪಸ್ಥಿತರಿದ್ದರು .

ಈ ಕಾರ್ಯಕ್ರಮನ್ನು ಎಸ್ ಡಿ ಪಿ ಐ ಬಂಟ್ವಾಳ ಪುರಸಭಾ ಸಮಿತಿ ಸದಸ್ಯರಾದ ಶಾವುಲ್ ತಲಪಾಡಿ ನಿರ್ವಹಿಸಿದರು. ಅನ್ವರ್ ಕೆಎಚ್ ಸ್ವಾಗತಿಸಿ ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

Leave a Reply

Your email address will not be published. Required fields are marked *

error: Content is protected !!