March 26, 2026

ಕುಂದಾಪುರ: ಚಲಿಸುತ್ತಿದ್ದ ಕಾರು ಸಮುದ್ರಕ್ಕೆ ಉರುಳಿ ಒಬ್ಬ ಮೃತ್ಯು: ಮತ್ತೊಬ್ಬ ನಾಪತ್ತೆ

0
image_editor_output_image-395263449-1656824317531

ಕುಂದಾಪುರ: ಮರವಂತೆಯ ವರಾಹಸ್ವಾಮಿ ದೇವಸ್ಥಾನದ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ‌.

ಕಾರಿನಲ್ಲಿ ನಾಲ್ವರಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಕುಂದಾಪುರ ಮೂಲದ ವಿರಾಜ್ ಆಚಾರ್ (28)‌ ಮೃತಪಟ್ಟವರು ಎಂದು ತಿಳಿದುಬಂದಿದೆ.

ರೋಶನ್ ಎಂಬವರು ನಾಪತ್ತೆಯಾಗಿದ್ದಾರೆ. ಘಟನೆಯಲ್ಲಿ ಕಾರ್ತಿಕ್ ಹಾಗೂ ಸಂದೇಶ ಎನ್ನುವ ಇಬ್ಬರು ಯುವಕರಿಗೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದ ಕೋಟೇಶ್ವರ ಸಮೀಪದಿಂದ ಬೈಂದೂರು ಕಡೆಗೆ ಕಾರು ತೆರಳುತ್ತಿತ್ತು ಎನ್ನಲಾಗಿದೆ. ಈ ವೇಳೆ‌ ಚಾಲಕನ‌ ನಿಯಂತ್ರಣ ತಪ್ಪಿದ ಕಾರು ಸಮುದ್ರಕ್ಕೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.

ಕಾರು ನಜ್ಜುಗುಜ್ಜಾಗಿದ್ದು ಗಂಗೊಳ್ಳಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ರವಿವಾರ ಮುಂಜಾನೆ ವೇಳೆಗೆ ಕಾರನ್ನು ಮೇಲಕ್ಕೆತ್ತಲಾಗಿದೆ.‌ ನಾಪತ್ತೆಯಾದ ಯುವಕನಿಗೆ ಶೋಧ ನಡೆಸಲಾಗುತ್ತಿದೆ. ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!