ಕಾಸರಗೋಡು: ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯಿಂದಾಗಿ ನಾಳೆಯೂ(ಜುಲೈ 6) ಕಾಸರಗೋಡಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ಹೊರಡಿಸಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

