December 19, 2025

ಬೈಕ್ ಮತ್ತು ಬಸ್ ನಡುವೆ ಅಪಘಾತ: ಇಬ್ಬರು ಮೃತ್ಯು

0
n330115288163610273325400ecd1a71446267357dbdb0ea061954371a74afd10a6282e14e21c6be5d6be11.jpg

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಮಂಜುನಾಥ್ (28) ಅಂತೋನಿ (35) ಎಂದು ಗುರುತಿಸಲಾಗಿದೆ.‌ ಇಬ್ಬರು ಭದ್ರಾವತಿ ತಾಲೂಕಿನ ಜಯಂತಿ ನಗರ ಗ್ರಾಮಸ್ಥರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!