July 6, 2026

ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯದಲ್ಲೇ ಅಳವಡಿಸಲು ಸುನೀಲ್ ಕುಮಾರ್ ಒತ್ತಾಯ

0
image_editor_output_image-328046213-1657608227082.jpg

ಬೆಂಗಳೂರು: ಇಂಧನ ಸಚಿವ ವಿ. ಸುನಿಲ್‌ ಕುಮಾರ್ ಅವರ ಒತ್ತಾಯಕ್ಕೆ ಮಣಿದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯದಲ್ಲೇ ಅಳವಡಿಸಲು ಆದೇಶ ಹೊರಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೋಮವಾರ ನಿರ್ದೇಶನ ನೀಡಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರು ಅವರಿಗೆ ಸಂಬಂಧಿಸಿದ ಪಠ್ಯವನ್ನು ಈ ಹಿಂದೆ ಇದ್ದಂತೆ ಸಮಾಜ ವಿಜ್ಞಾನ ವಿಷಯದಲ್ಲೇ ಅಳವಡಿಸುವಂತೆ ಸುನಿಲ್‌ ಕುಮಾರ್‌ ಅವರು ಬಿ.ಸಿ. ನಾಗೇಶ್‌ ಅವರಿಗೆ ಪತ್ರ ಬರೆದಿದ್ದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಉಪಸ್ಥಿತಿಯಲ್ಲೇ ನಾಗೇಶ್‌ ಅವರನ್ನು ಸೋಮವಾರ ಭೇಟಿಮಾಡಿ ಪತ್ರವನ್ನು ಸಲ್ಲಿಸಿದ್ದರು.

ನಾರಾಯಣ ಗುರುಗಳಿಗೆ ಸಂಬಂಧಿಸಿದ ಪಠ್ಯವನ್ನು ಸಮಾಜ ವಿಜ್ಞಾನ ವಿಷಯದಿಂದ ಕನ್ನಡ ವಿಷಯಕ್ಕೆ ವರ್ಗಾವಣೆ ಮಾಡಿರುವುದನ್ನು ಆಕ್ಷೇಪಿಸಿ ಹಲವರು ತಮ್ಮ ಬಳಿ ಚರ್ಚಿಸಿರುವುದನ್ನು ಆಧರಿಸಿ ಪತ್ರ ಬರೆದಿರುವುದಾಗಿ ಇಂಧನ ಸಚಿವರು ತಿಳಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!