ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ನಿವೃತ್ತ ಡಿವೈಎಸ್ಪಿ, ಪತ್ನಿ ಸ್ಥಳದಲ್ಲೇ ಸಾವು
ಚಿತ್ರದುರ್ಗ : ರಾಷ್ಟ್ರೀಯ ಹೆದ್ದಾರಿ 4 ರ ಕಸವನಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ರಭಸಕ್ಕೆ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ ಪಿ ಮತ್ತು ಅವರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಜೋಗಿ ಹಳ್ಳಿ ಮೂಲದ ಅಬಕಾರಿ ಇಲಾಖೆ ನಿವೃತ್ತ ಡಿವೈಎಸ್ ಪಿ ಜಯರಾಂ ನಾಯ್ಕ್ (73) ಅವರ ಪತ್ನಿ ಲತಾ (63) ಮೃತರು.
ಬೆಂಗಳೂರಿನಿಂದ ದಾವಣಗೆರೆಗೆ ಸಂಚರಿಸುವ ಮಾರ್ಗ ಮಧ್ಯೆ ಕಸವನಹಳ್ಳಿ ಬಳಿ ಚಲಿಸುತ್ತಿದ್ದ ಲಾರಿಗೆ ಮಾರುತಿ ಸ್ವಿಪ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.




