ಸುಳ್ಯ: ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಮೃತ್ಯು
ಸುಳ್ಯ: ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ತಂಗುದಾಣದಲ್ಲಿಯೇ ಮೃತಪಟ್ಟ ಘಟನೆ ಮರ್ಕಂಜ ಎಂಬಲ್ಲಿ ನಡೆದಿದೆ.
ಮೃತರನ್ನು ಕೆಎಸ್ಆರ್ಟಿಸಿಯ ಪುತ್ತೂರು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲೇಶ್ (56) ಎಂದು ಗುರುತಿಸಲಾಗಿದೆ.
ಮಲ್ಲೇಶ್ ರವರು ಮರ್ಕಂಜ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯಲು ಹೋದ ವೇಳೆ ಅವರಿಗೆ ತೀವ್ರವಾದ ಎದೆನೋವಿನೊಂದಿಗೆ ಉಸಿರಾಟದ ತೊಂದರೆಯಾಗಿದ್ದು, ಬಸ್ಸಿನ ನಿರ್ವಾಹಕ ಸಿದ್ದಪ್ಪ ರವರು ಮಲ್ಲೇಶ್ ನನ್ನು ಸಮೀಪದಲ್ಲೇ ನಿಂತಿದ್ದ ಜೀಪಿನಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದಿದಿದ್ದಾರೆ ಎನ್ನಲಾಗಿದೆ. ಆದರೆ ಅಷ್ಟರಲ್ಲಾಗಲೇ ಮಲ್ಲೇಶ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.