ಉಡುಪಿ: ಚಾಕಲೇಟ್ ತಿನ್ನುವ ವೇಳೆ ಕವರ್ ಸಮೇತ ನುಂಗಿದ ಬಾಲಕಿ ಉಸಿರುಗಟ್ಟಿ ಮೃತ್ಯು
ಉಡುಪಿ: ಬಸ್ಗಾಗಿ ಕಾಯುತ್ತಿದ್ದ 7 ವರ್ಷದ ಬಾಲಕಿ ಚಾಕಲೇಟ್ ತಿನ್ನುವ ವೇಳೆ ಕವರ್ ಸಮೇತ ನುಂಗಿದ ಹಿನ್ನೆಲೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉಡುಪಿಯ ಬೈಂದೂರು ಬಳಿಯ ಬಿಜೂರಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಮೂಲದ ಸಮನ್ವಿ ಸಾವನ್ನಪ್ಪಿರುವ ಬಾಲಕಿ. ಸಮನ್ವಿ ಬುಧವಾರ ಬೆಳಿಗ್ಗೆ ಎಂದಿನಂತೆಯೇ ಶಾಲೆಗೆ ಹೊರಡಲು ಸಮವಸ್ತ್ರ ಧರಿಸಿ ಸಿದ್ಧವಾಗಿದ್ದಳು. ಸಮನ್ವಿ ಸ್ಥಳೀಯ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದಳು.
ಸಮನ್ವಿ ಶಾಲೆಗೆ ಹೋಗಲು ಒಪ್ಪದೇ ಅಳುತ್ತಿದ್ದಳು, ಇದರಿಂದಾಗಿ ಮನೆಯವರು ಆಕೆಗೆ ಪುಸಲಾಯಿಸಿ ಶಾಲೆಗೆ ಹೊರಡಿಸಿದ್ದು. ಕೈಯಲ್ಲೊಂದು ಚಾಕ್ಲೆಟ್ ನೀಡಿದ್ದರು ಎನ್ನಲಾಗಿದೆ.




