ಹಿರಿಯ ಚಿಂತಕ, ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ್ ನಿಧನಕ್ಕೆ ಸುಮತಿ ಹೆಗ್ಡೆಯವರಿಂದ ತೀವ್ರ ಸಂತಾಪ
ಮಂಗಳೂರು: ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗೂ ಜನಪರ ಹೋರಾಟಗಾರಾದ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ ಅವರ ನಿಧನಕ್ಕೆ ಜೆ.ಡಿ.ಎಸ್.ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆಯಾದ ಡಾ.ಸುಮತಿ ಎಸ್. ಹೆಗ್ಡೆಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಡಾ.ಸುಮತಿ ಎಸ್.ಹೆಗ್ಡೆಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


