ಪ್ರವೀಣ್ ಹತ್ಯೆ ಪ್ರಕರಣ: ಸಂಘಪರಿವಾರದಿಂದ ವಿಟ್ಲ ಬಂದ್ಗೆ ಕರೆ
ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ
ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ವಿಟ್ಲ ಬಂದ್ಗೆ ಕರೆ ನೀಡಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತಿದೆ
ಬಿಜೆಪಿಯ ಪ್ರಮುಖರು ಬಿಜೆಪಿ ಕಾರ್ಯಲಯದಲ್ಲಿ ಸಭೆ ನಡೆಸಿದ್ದು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಕರೆ ನೀಡಿದ್ದಾರೆ. ಕೆಲ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿದೆ.