ಚಿನ್ನ ಕಳ್ಳಸಾಗಾಣಿಕೆ ಪ್ರಕರಣ:
ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಗೆ ಜಾಮೀನು
ತಿರುವನಂತಪುರಂ: ಕೇರಳ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸಿದ್ದ ಚಿನ್ನ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಗೆ ಜಾಮೀನು ನೀಡಲಾಗಿದೆ. ಬಂಧನವಾಗಿ 16 ತಿಂಗಳ ಬಳಿಕ ಇಂದು ಸ್ವಪ್ನ ಸುರೇಶ್ ಗೆ ಜೈಲಿನಿಂದ ಹೊರಬಂದಿದ್ದಾರೆ.
ಯುಎಪಿಎ ಪ್ರಕರಣದಲ್ಲಿ ಸುರೇಶ್ ಮತ್ತು ಇತರ 7 ಮಂದಿಗೆ ಕೇರಳ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಅವರು ವಿರುದ್ಧ ಆರೋಪಿಸಿದಂತೆ ಯಾವುದೇ ಭಯೋತ್ಪಾದಕ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
25 ಲಕ್ಷ ರೂಪಾಯಿ ಜಾಮೀನು ಬಾಂಡ್ ಮತ್ತು ಎರಡು ಶ್ಯೂರಿಟಿಗಳ ಮೇಲೆ ಯುಎಪಿಎ ಅಡಿಯಲ್ಲಿ ಎನ್ಐಎ ದಾಖಲಿಸಿದ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ನವೆಂಬರ್ 2 ರಂದು ಆಕೆಗೆ ಜಾಮೀನು ನೀಡಿದೆ. ಇಂದು ಜೈಲಿನಿಂದ ಬಿಡುಗಡೆಯಾದರು.




