March 26, 2026

ಬೆಳ್ತಂಗಡಿ: ತೆಂಗಿನ ಮರದಿಂದ ಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

0
Screenshot_2022-07-28-10-59-19-07_680d03679600f7af0b4c700c6b270fe7.jpg

ಬೆಳ್ತಂಗಡಿ: ಕಾರ್ಮಿಕರೊಬ್ಬರು ತೆಂಗಿನ ಮರದಿಂದ ಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಜೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ನಿನ್ನಿಕಲ್ಲು ಪಾಲೆಂಜದ ಆನಂದ (40) ಮೃತಪಟ್ಟವರು. ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟರು. ಅಡಿಕೆಗೆ ಔಷಧ ಸಿಂಪಡಿಸುವುದು, ತೆಂಗಿನಕಾಯಿ ಕೀಳುವ ಕೆಲಸದಲ್ಲಿ ಅವರು ತೊಡಗಿಸಿಕೊಂಡಿದ್ದರು.

ಬೆಳ್ತಂಗಡಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪ್ರಾಥಮಿಕ ವರದಿ ಪಡೆದಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!