ಫಾಝಿಲ್ ಕೊಲೆ – ಸುರತ್ಕಲ್, ಮುಲ್ಕಿ, ಪಣಂಬೂರು ಮತ್ತು ಬಜಪೆ ಠಾಣಾ ವ್ಯಾಪ್ತಿಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ ಕೊಲೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಫಾಜಿಲ್ ಮಂಗಲಪೇಟೆ (23) ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವ್ಯಾಪಕ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಸುರತ್ಕಲ್ನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಹತ್ಯೆಯ ಹಿನ್ನೆಲೆಯಲ್ಲಿ ಸಾಮಾಜಿಕ ವಾತಾವರಣ ಕಾವೇರಿರುವುದರಿಂದ ಸುರತ್ಕಲ್, ಪಣಂಬೂರು, ಬಜ್ಪೆ, ಮುಲ್ಕಿ ಸುತ್ತಮುತ್ತಲ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಜೆ ಕೊಡುವಂತೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ವಿನಂತಿಸಿದ್ದರು.
ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ.ಸುಳ್ಯ





