September 8, 2024

ದ.ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನೈಟ್‌ ಕರ್ಫ್ಯೂ ಮುಂದುವರಿಕೆ:
ದ.ಕ ಜಿಲ್ಲಾಧಿಕಾರಿ ಆದೇಶ

0

ಮಂಗಳೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆರಡು ದಿನ ನೈಟ್‌ ಕರ್ಫ್ಯೂ ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್‌ ಕರ್ಫ್ಯೂ ಮುಂದುವರೆಯಲಿದೆ. ಮೂರು ದಿನಗಳ ಹಿಂದೆ ಹೊರಡಿಸಿದ್ದ ನೈಟ್‌ ಕರ್ಫ್ಯೂ ಆದೇಶ ಇಂದಿಗೆ ಕೊನೆಯಾದ ಹಿನ್ನೆಲೆಯಲ್ಲಿ ಇಂದು ಮತ್ತೆ ಎರಡು ದಿನಗಳಿಗೆ ವಿಸ್ತರಿಸಿ ಆದೇಶ ಮಾಡಲಾಗಿದೆ.

ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಆದೇಶ ಹೊರಡಿಸಲಾಗಿದ್ದು, ತುರ್ತು ಸೇವೆಗೆ ಮಾತ್ರ ಅವಕಾಶ. ಈ ಆದೇಶ ಆ.3ರ ಮುಂಜಾನೆಯವರೆಗೆ ನಿರ್ಬಂಧ ಮುಂದುವರೆಯಲಿದೆ.

Leave a Reply

Your email address will not be published. Required fields are marked *

error: Content is protected !!