March 26, 2026

ತಿಗಣೆ, ಜಿರಳೆ ನಾಶಪಡಿಸಲು ಮನೆಯಲ್ಲಿ ಔಷಧ ಸಿಂಪಡಣೆ: ಉಸಿರುಗಟ್ಟಿ 6 ವರ್ಷದ ಬಾಲಕಿ ಸಾವು

0
image_editor_output_image-1278936096-1659502285826.jpg

ಬೆಂಗಳೂರು: ತಿಗಣೆ, ಜಿರಳೆ ನಾಶಪಡಿಸಲು ಮನೆಯಲ್ಲಿ ಸಿಂಪಡಿಸಿದ್ದ ಔಷಧದಿಂದಾಗಿ ಆರು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವಸಂತನಗರದ ಮಾರಮ್ಮ ದೇವಸ್ಥಾನದ ಬಳಿ ಮನೆಯೊಂದರಲ್ಲಿ ತಡರಾತ್ರಿ ನಡೆದಿದೆ.

ಮೃತ ಬಾಲಕಿಯನ್ನು ಅಹನಾ (6) ಎಂದು ಗುರುತಿಸಲಾಗಿದೆ. ಬಾಲಕಿಯ ತಂದೆ ವಿನೋದ್ ನಾಯರ್ ಹಾಗೂ ತಾಯಿಯೂ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಲತಃ ಕೇರಳದವರಾಗಿರುವ ವಿನೋದ್ ನಾಯರ್ ಕುಟುಂಬ ಸುಮಾರು 8 ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿತ್ತು.ವಿನೋದ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು , ಬಾಲಕಿ ಅಹನಾ ವಸಂತನಗರದ ಶಾಲೆಯಲ್ಲಿ ಓದುತ್ತಿದ್ದಳು.

ಇಲ್ಲಿನ ಕಟ್ಟಡದ 4 ಮನೆಗಳಲ್ಲಿ ಜಿರಳೆ ಕಾಟವೆಂದು ಮಾಲೀಕ ಶಿವಶಂಕರ್ ಔಷಧ ಸಿಂಪಡಿಸಿ, ಒಂದು ವಾರ ಮನೆಗಳನ್ನ ಖಾಲಿ ಬಿಡುವಂತೆ ನಿವಾಸಿಗಳಿಗೆ ಸೂಚಿಸಿದ್ದರು. ಅದರಂತೆ ತಾತ್ಕಾಲಿಕವಾಗಿ ಮನೆ ಖಾಲಿ ಮಾಡಿದ್ದ ಬಾಲಕಿಯ ಪೋಷಕರು, ಬಳಿಕ ಮಾಲೀಕನಿಗೆ ಹೇಳದೇ ನಾಲ್ಕೇ ದಿನದಲ್ಲಿ ಮನೆಗೆ ಮರಳಿದ್ದರು ಎಂದು ಮಾಲೀಕ ಶಿವಶಂಕರ್ ದೂರಿದ್ದಾರೆ.

Leave a Reply

Your email address will not be published. Required fields are marked *

error: Content is protected !!