ಮಳೆಹಾನಿ: ಪರಿಹಾರ ಪಡೆದವರಿಗೆ ಮತ್ತೆ ಪರಿಹಾರ ಇಲ್ಲ: ರಾಜ್ಯ ಸರಕಾರ ಆದೇಶ
ಬೆಂಗಳೂರು : ಕಳೆದ ಮೂರು ವರ್ಷದಲ್ಲಿ ಸಂಭವಿಸಿದ ಮಳೆಯಿಂದ ಮನೆ ಕಳೆದುಕೊಂಡು ಪರಿಹಾರ ಪಡೆದವರ ಮನೆಗೆ ಈ ವರ್ಷ ಮತ್ತೆ ಹಾನಿಯಾದರೆ ಪರಿಹಾರ ಕೊಡುವಂತಿಲ್ಲ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.
ಈ ಬಗ್ಗೆ ಕೆಲವು ಜಿಲ್ಲಾಧಿಕಾರಿಗಳು ಪತ್ರ ಬರೆದು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದಿಂದ ಈ ಸ್ಪಷ್ಟನೆ ನೀಡಲಾಗಿದೆ.
2019, 2020, 2021 ನೇ ವರ್ಷದಲ್ಲಿ ಎ ಅಥವಾ ಬಿ ಕೆಟಗರಿಯಲ್ಲಿ ಪರಿಹಾರ ಪಡೆದಿರುವ ಸಂತ್ರಸ್ತರ ಮನೆಗಳಿಗೆ ಈ ಸಾಲಿನಲ್ಲಿ ಮತ್ತೆ ಪರಿಹಾರ ನೀಡುವುದಕ್ಕೆ ಅವಕಾಶವಿಲ್ಲ.
ಆದರೆ ಈ ವರ್ಷಗಳಲ್ಲಿ ಅಲ್ಪಸ್ವಲ್ಪ ಹಾನಿಗೊಳಗಾದ ಸಿ ಕೆಟಗರಿಯಲ್ಲಿ ಐವತ್ತು ಸಾವಿರ ರೂ. ಪಡೆದ ಮನೆಗಳಿಗೆ ಈ ಬಾರಿ ಎ,ಬಿ,ಸಿ ವಿಭಾಗದಲ್ಲಿ ಪರಿಹಾರ ಪಾವತಿಸಬಹುದು.




