ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದ ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿ, ಶಶಿ ತರೂರ್, ಕೆ.ಸಿ. ವೇಣುಗೋಪಾಲ್ ಪೊಲೀಸ್ ವಶಕ್ಕೆ
ನವದೆಹಲಿ: ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶಶಿ ತರೂರ್, ಕೆ.ಸಿ. ವೇಣುಗೋಪಾಲ್ ಹಾಗೂ ಹಲವು ಮಂದಿ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದ ವಿರುದ್ಧ ಕಾಂಗ್ರೆಸ್ ರಾಷ್ಟ್ರವ್ಯಾಪಿ ಹೋರಾಟ ಹಮ್ಮಿಕೊಂಡಿದೆ. ಪ್ರತಿಭಟನೆ ಅಂಗವಾಗಿ ಪಕ್ಷದ ನಾಯಕರು ದೆಹಲಿಯ ಸಂಸತ್ ಭವನದಿಂದ ರಾಷ್ಟ್ರಪತಿ ಭವನಕ್ಕೆ ಜಾಥಾ ಕೈಗೊಂಡರು. ದೆಹಲಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದ ಹಿನ್ನೆಲೆಯಲ್ಲಿ ಜಾಥಾವನ್ನು ಪೊಲೀಸರು ಅರ್ಧದಲ್ಲೇ ತಡೆದರು.




