ದ.ಕ ಜಿಲ್ಲೆಯಲ್ಲಿದ್ದ ರಾತ್ರಿ 9 ಗಂಟೆ ನಂತರದ ನಿರ್ಬಂಧ ತೆರವು: ದ.ಕ ಜಿಲ್ಲಾಧಿಕಾರಿ ಆದೇಶ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಅಪರಾಧ ಕೃತ್ಯ ನಡೆದ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಸದ್ಯ ನಿರ್ಬಂಧಗಳನ್ನು ತೆರೆಯಲು ದ.ಕಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೊಲೆ ಕೃತ್ಯ ಹಿನ್ನೆಲೆಯಲ್ಲಿ ವಿಧಿಸಿದ್ದ ರಾತ್ರಿ ನಿರ್ಬಂಧ ತೆರವು
ರಾತ್ರಿ 9 ಗಂಟೆಯ ಬಳಿಕ ಇದ್ದ ವ್ಯಾಪಾರ ನಿರ್ಬಂಧ ತೆರವು
ಅಂಗಡಿ, ವೈನ್ ಶಾಪ್, ಬಾರ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ
ಜನರ ಓಡಾಟಕ್ಕೂ ಯಾವುದೇ ನಿರ್ಬಂಧ ಇಲ್ಲ
ಆಗಸ್ಟ್ 14 ತನಕ 144 ಸೆಕ್ಷನ್ ಮುಂದುವರಿಕೆ
ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.





