ನಿರ್ಮಾಪಕನಿಗೆ ಬೆದರಿಕೆ: ನಟ ದರ್ಶನ್ ವಿರುದ್ಧ ದೂರು ದಾಖಲು
ಬೆಂಗಳೂರು: ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ನಿರ್ಮಾಪಕ ಭರತ್ ವಿಷ್ಣುಕಾಂತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
‘2020 ರಲ್ಲಿ ಧ್ರುವನ್ ನಾಯಕ ನಟನನ್ನಾಗಿಸಿಕೊಂಡು ‘ಭಗವಾನ್ ಶ್ರೀ ಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾ ಪ್ರಾರಂಭಿಸಿದೆ. ಕೆಲವು ದಿನಗಳ ಬಳಿಕ ದರ್ಶನ್ ಅವರು ಕರೆ ಮಾಡಿ ಬೇರೆ ಕತೆಯೊಂದನ್ನು ಸೂಚಿಸಿ ಆ ಕತೆಯನ್ನು ಸಿನಿಮಾ ಮಾಡುವಂತೆ ಹೇಳಿದರು. ದರ್ಶನ್ ಹಾಗೂ ನಟ ಧ್ರುವನ್ ಸೇರಿ ನಿರ್ದೇಶಕರನ್ನೂ ಬದಲಿಸಿದರು. ನಾನೂ ಸಹ ಒಪ್ಪಿಕೊಂಡೆ ಆದರೆ ಕಾರಣಾಂತರಗಳಿಂದ ಸಿನಿಮಾದ ಚಿತ್ರೀಕರಣ ತಡವಾಯಿತು” ಎಂದಿದ್ದಾರೆ.




