February 4, 2026

ಎರಡು ಗುಂಪಿನ ನಡುವೆ ಮಾರಾಮಾರಿ-ಕಲ್ಲು ತೂರಾಟ: ಇಬ್ಬರು ಮೃತ್ಯು

0
image_editor_output_image1026305683-1660197487501.jpg

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಯಂಕಪ್ಪ ತಳವಾರ (60), ಪಾಷವಲಿಸಾಬ ಮಾಳಿಗದ್ದಿ (22) ಮೃತಪಟ್ಟವರು.

ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಕಲ್ಲು ತೂರಾಟ ಕೂಡ ನಡೆದಿದ್ದು, ಘಟನೆಗೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ.

Leave a Reply

Your email address will not be published. Required fields are marked *

error: Content is protected !!