ಬಿಕರ್ನಕಟ್ಟೆಯಲ್ಲಿ ಸ್ಕೂಟರ್ ಅಪಘಾತದಲ್ಲಿ ಸವಾರ ಮೃತ್ಯು: ರಸ್ತೆ ಗುಂಡಿಗಳನ್ನು ತುಂಬಿಸದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ
ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ನಲ್ಲಿ ಕಳೆದ ಶುಕ್ರವಾರ ಸ್ಕೂಟರ್ ಅಪಘಾತದಲ್ಲಿ ಸವಾರ ಆತಿಶ್ (20) ಮೃತಪಟ್ಟಿದ್ದು, ನಗರದ ಗುಂಡಿಗಳನ್ನು ತುಂಬಿಸದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕೊಲೆ ದೂರು ದಾಖಲಿಸುವಂತೆ ನೆಟ್ಟಿಗರು ಆಗ್ರಹಿಸಿದ್ದು, ಇನ್ನು ಕೆಲವರು ಜನಪ್ರತಿನಿಧಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.




