March 25, 2026

ಈದ್ಗಾ ಮೈದಾನದಲ್ಲಿ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶ ಇಲ್ಲ: ರಾಜ್ಯ ಸರಕಾರ ತೀರ್ಮಾನ

0
image_editor_output_image-373325716-1660209124275.jpg

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ವಿವಾದವನ್ನು ತಣ್ಣಗಾಗಿಸಲು ಸರಕಾರ ಮುಂದಾಗಿದ್ದು, ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶ ನೀಡದೇ ಇರಲು ನಿರ್ಧರಿಸಿದೆ.

ಕಂದಾಯ ಸಚಿವ ಆರ್.ಅಶೋಕ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಸರಕಾರದ ವತಿಯಿಂದಲೇ ಈ ಬಾರಿ ಧ್ವಜಾರೋಹಣ‌ ನಡೆಸಲಾಗುತ್ತದೆ.

ಸರಕಾರದ ಪರವಾಗಿ ಉಪವಿಭಾಗಾಧಿಕಾರಿ ಧ್ವಜಾರೋಹಣ ನಡೆಸಲಿದ್ದು, ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಯಾವುದೇ ಸಂಘಟನೆಗಳಾಗಲಿ, ಶಾಸಕ ಜಮೀರ್ ಅಹ್ಮದ್ ಖಾನ್ ಅವರಾಗಲಿ ವೈಯಕ್ತಿಕವಾಗಿ ಧ್ವಜಾರೋಹಣ ನಡೆಸುವಂತಿಲ್ಲ. ಸರಕಾರವೇ ಧ್ವಜಾರೋಹಣ‌ ನಡೆಸುತ್ತದೆ ಎಂದು ಸಭೆಯ ಬಳಿಕ‌ ಕಂದಾಯ ಸಚಿವ ಆರ್.ಅಶೋಕ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!