ಮಳೆಗೆ ರಸ್ತೆ ಸಂಪರ್ಕ ಕಡಿತ: ರಸ್ತೆ ಸಂಚಾರ ಸಂಪೂರ್ಣ ಬಂದ್
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಮುಂದುವರಿದಿದ್ದು, ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಕೂಡಿಗೆಯಲ್ಲಿ ಮಳೆಗೆ ರಸ್ತೆ ಸಂಪರ್ಕ ಕಡಿತಗೊಂಡು ಕೊಚ್ಚಿ ಹೋಗಿದೆ.
ಮೇಗೂರು, ಕೊಗ್ರೆ, ತಲವಾನೆ ಸೇರಿ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದರಿಂದ ವಿದ್ಯಾರ್ಥಿಗಳು, ಜನಸಾಮಾನ್ಯರ ಪರದಾಡುವಂತಾಗಿದೆ.




