ವೆಲ್ಫೇರ್ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ವಿಚಾರಗೋಷ್ಠಿ
ಮಂಗಳೂರು: ವೆಲ್ಫೇರ್ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ವಿಚಾರಗೋಷ್ಠಿ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷೆಯಾದ ಮರೀಯಂ ಶಹೀರ ಮತ್ತು ಎಸ್ ಎಂ ಮುತ್ತಲಿಬ್ ತಮ್ಮವಿಚಾರವಿನಿಮಯ ಮಾಡಿದರು. ಜಿಲ್ಲಾಧ್ಯಕ್ಷರಾದ ಅಡ್ವೊಕೇಟ್ ಸರ್ಫರಾಝ್ ಅಧ್ಯಕ್ಷಾ ಮಾತನ್ನಾಡಿದರು. ಈ ಸಂಧರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀಕಾಂತ್ ಸಾಲ್ಯಾನ್, ರಾಜ್ಯ ಕಾರ್ಯದರ್ಶಿಯಾದ ಮೊಯಿನುದ್ದೀನ್ ಕಮರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಹಮ್ಮದ್ ಸೈಫ್,ಜಿಲ್ಲಾ ಮಾದ್ಯಮ ಕಾರ್ಯದರ್ಶಿಯಾದ ಅಬ್ದುಲ್ ಖಾದರ್ ಕುಕ್ಕಾಜೆ,ಜಿಲ್ಲಾ ವಕ್ತಾರರಾದ ಅರಫಾ ಮಂಚಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.