ಆಗೋಸ್ಟ್ 22ರಂದು ಸ್ವಾತಂತ್ರ ಅಮೃತ ಮಹೋತ್ಸವ ಪ್ರಯುಕ್ತ ಕಾಂಗ್ರೆಸ್ ಪಾದಯಾತ್ರೆ: ವಿಟ್ಲದಲ್ಲಿ ಕಾಂಗ್ರೆಸ್ ಪ್ರಮುಖರ ಸಭೆ
ವಿಟ್ಲ: 75ನೇ ಸ್ವಾತಂತ್ರದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಅಖಿಲ ಭಾರತ ರಾಷ್ಟೀಯ ಕಾಂಗ್ರೆಸ್ ಪಕ್ಷವು ಹಮ್ಮಿಕೊಂಡಿರುವ ಪಾದಯಾತ್ರೆ ಕಾರ್ಯಕ್ರಮದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ದರ್ಬೆಯಿಂದ ವಿಟ್ಲದವರೆಗೆ ನಡೆಯುವ ಕಾಂಗ್ರೆಸ್ ಪಾದಯಾತ್ರೆಯ ಯಶಸ್ವಿಗಾಗಿ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿಯವರ ನೇತ್ರತ್ವದಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಹಾಗೂ ಪುತ್ತೂರು ಬ್ಲಾಕ್ ನ ಕಾಂಗ್ರೆಸ್ ಪ್ರಮುಖರ ಸಭೆಯು ನಡೆಯಿತು.
ಈ ಸಭೆಯಲ್ಲಿ ಪಾದಯಾತ್ರೆಯನ್ನು ಯಶಸ್ವಿಯಾಗಿ ನಡೆಸುವರೇ ಪಕ್ಷದ ಕೆಲವು ಪ್ರಮುಖರಿಗೆ ಜವಾಬ್ದಾರಿ ನೀಡಲಾಯಿತು.
ಈ ಸಭೆಯಲ್ಲಿ ಅತ್ಯುತ್ತಮ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ಪಡೆದಿರುವ ಪುತ್ತೂರು ಬನ್ನೂರು ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಪೆರ್ನೆ ಸಹಕಾರಿ ಸಂಘದ ಅಧ್ಯಕ್ಷ ತೊಯಜಾಸ ಶೆಟ್ಟಿ, ಬಲ್ನಾಡ್ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಗೌಡ ರವರನ್ನು ಸನ್ಮಾನಿಸಲಾಯಿತು
ಸಭೆಯಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ :ರಾಜರಾಮ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್,ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿ ಸೋಜಾ,ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಹಾಗೂ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಗಳಾದ ಮುರಳೀಧರ ರೈ ಮಠ0ದಬೆಟ್ಟು, ಉಮಾನಾಥ್ ಶೆಟ್ಟಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಣೆಯ ಜಿಲ್ಲಾ ಅಧ್ಯಕ್ಷ ಹಾಗೂ ವಿಟ್ಲ ಬ್ಲಾಕ್ ಉಸ್ತುವಾರಿ ಶುಭಾಸ್ ಚಂದ್ರ ಶೆಟ್ಟಿ ಕೋಲ್ನಾಡ್, ಮಾಜಿ ಬ್ಲಾಕ್ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ವಿಟ್ಲ ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಮನಾಥ್ ವಿಟ್ಲ, ವಿಟ್ಲ ಪಟ್ಟಣ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ, ಪಂಚಾಯತ್ ರಾಜ್ ಸಂಘಟನೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರ್, ಪುತ್ತೂರು ಸೇವಾದಳದ ಅಧ್ಯಕ್ಷ ವಿಶ್ವಜಿತ್ ಕೆಮ್ಮಿ0ಜೆ, ವಿಟ್ಲ ಬ್ಲಾಕ್ ಉಪಾಧ್ಯಕ್ಷರುಗಳಾದ ಅಶ್ರಫ್ ಬಸ್ತಿಕಾರ್, ಪ್ರಭಾಕರ್ ಭಟ್ ಮಾವೆ, ಶ್ರೀಧರ್ ಶೆಟ್ಟಿ ಪುಣಚ, ಜಯರಾಮ್ ಬಲ್ಲಾಲ್, ಬೀಪಾತುಮ್ಮಾ ಗಡಿಯಾರ್, ನಾರಾಯಣ ಗೌಡ ಬಲ್ನಾಡ್,ಬ್ಲಾಕ್ ಕಾರ್ಯದರ್ಶಿಗಳಾದ ಎಸ್ ಕೆ ಮಹಮ್ಮದ್ ಕುಂಹಿ,ಜಗನ್ನಾಥ ಶೆಟ್ಟಿ ಕೊಡಿ0ಬಾಡಿ, ಶರೀಫ್ ರೋಯಲ್ ಬಲ್ನಾಡ್, ವಿಟ್ಲ ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್,ಕಿಸಾನ್ ಘಟಕದ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕರೀಂ ಕುದ್ದುಪದವು, ಹಿಂದುಳಿದ ವರ್ಗದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ,ಅಸಂಗಟಿತ ಕಾರ್ಮಿಕ ಘಟಕದ ಅಧ್ಯಕ್ಷ ಸೇಶಪ್ಪ ನೆಕ್ಕಿಲ್,ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ವಿ ಕೆ ಎಂ ಅಶ್ರಫ್, ಹಸೈನಾರ್ ನೆಲ್ಲಿಗುಡ್ಡೆ, ಶ್ರೀಮತಿ ಪದ್ಮಿನಿ ಸೇರಾಜೆ, ಪೆರುವಾಯಿ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಅಳಿಕೆ ಪಂಚಾಯತ್ ಉಪಾಧ್ಯಕ್ಷ ಜಗದೀಶ್ ಶೆಟ್ಟಿ, ಅಳಿಕೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೀತರಾಮ ಶೆಟ್ಟಿ, ಪಂಚಾಯತ್ ಸದಸ್ಯರಾದ ತನಿಯಪ್ಪ ಪೂಜಾರಿ ಪೆರ್ನೆ, ಯಂಗ್ ಬ್ರಿಗೇಡ್ ನ ಉನೈಸ್ ಗಡಿಯಾರ್,ಕಾಂಗ್ರೆಸ್ ಮುಖಂಡರಾದ ನ್ಯಾಯವಾದಿ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಳಿಕೆ, ಎಂ ಕೆ ಮೂಸ, ಅಬ್ದುಲ್ ರಹಿಮಾನ್ ಕರಂಬುಳ,ಸಿರಾಜ್ ಪುಣಚ,ಸಂಶುದ್ದೀನ್ ಅಜ್ಜಿನಡ್ಕ ಸುಬ್ರಮಣ್ಯ ಗೌಡ ಕೊಡಿಪ್ಪಾಡಿ, ಮೊದಲಾದವರು ಉಪಸ್ಥಿತರಿದ್ದರು,





