December 19, 2025

ಕರ್ನಾಟಕ ಬಿಟ್‌ ಕಾಯಿನ್ ಹಗರಣದ ಆರೋಪಿಯ ಬಂಧನ

0
image_editor_output_image878526185-1636266839252.jpg

ಬೆಂಗಳೂರು: ಕರ್ನಾಟಕ ಬಿಟ್‌ ಕಾಯಿನ್ ಹಗರಣದ ಆರೋಪಿ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕ್ಕಿಯನ್ನು ಬೆಂಗಳೂರು ಪೊಲೀಸರು ಶನಿವಾರ ನಗರದ ಹೋಟೆಲ್‌ನಲ್ಲಿ ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಶ್ರೀಕ್ಕಿ ಮತ್ತು ವಿಷ್ಣು ಭಟ್ ಎಂಬ ವ್ಯಕ್ತಿ ಹೋಟೆಲ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದ ನಂತರ ವಿಷ್ಣು ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಹೋಟೆಲ್ ಅಧಿಕಾರಿಗಳು ಪೊಲೀಸರಿಗೆ ಕರೆ ಮಾಡಿದ ನಂತರ ಶ್ರೀಕ್ಕಿ ಮತ್ತು ವಿಷ್ಣು ಭಟ್ ಅವರನ್ನು ಬಂಧಿಸಲಾಯಿತು.

“ಶ್ರೀಕ್ಕಿ ಮತ್ತು ವಿಷ್ಣು ಭಟ್ ಸ್ನೇಹಿತರು, ಇಬ್ಬರು ಮತ್ತು ಹೋಟೆಲ್ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದ್ದು, ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಕರೆ ಮಾಡಿದರು. ನಾವು ಶ್ರೀಕ್ಕಿ ಮತ್ತು ವಿಷ್ಣು ಭಟ್ ಇಬ್ಬರನ್ನೂ ಠಾಣೆಗೆ ಕರೆತಂದಿದ್ದೇವೆ. ಹೋಟೆಲ್ ಸಿಬ್ಬಂದಿ ಯಾವುದೇ ಲಿಖಿತ ದೂರು ನೀಡಿಲ್ಲ. ನಾವು ಅದಕ್ಕಾಗಿ ಕಾಯುತ್ತಿದ್ದೇವೆ ಮತ್ತು ಅದರ ಆಧಾರದ ಮೇಲೆ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀಕೃಷ್ಣ ಹ್ಯಾಕರ್ ಆಗಿದ್ದು, ಅವರು 2018 ರಿಂದ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ, ಇತ್ತೀಚೆಗೆ ಹಣಕಾಸು ತನಿಖಾ ಸಂಸ್ಥೆಯು ಹಲವಾರು ಸಂದರ್ಭಗಳಲ್ಲಿ ಪ್ರಶ್ನಿಸಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಶ್ರೀಕೃಷ್ಣನನ್ನು ಬಂಧಿಸಲಾಗಿತ್ತು. ಶ್ರೀಕೃಷ್ಣ ಹ್ಯಾಕರ್ ಎಂದು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದು, ಕ್ರಿಪ್ಟೋಕರೆನ್ಸಿ ವಹಿವಾಟು ನಡೆಸುವವರ ಖಾತೆಗಳಿಗೆ ಕನ್ನ ಹಾಕಿ 9 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಬಿಟ್‌ಕಾಯಿನ್‌ಗಳನ್ನು ವಶಪಡಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!