ಬೆಳ್ತಂಗಡಿ: ಹಿಂಸಾತ್ಮಕವಾಗಿ ಗೋವುಗಳ ಸಾಗಾಟ, ಪೊಲೀಸರ ಮೇಲೆಯೇ ವಾಹನ ಚಲಾಯಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳು
ಬೆಳ್ತಂಗಡಿಯ ನಡ ಗ್ರಾಮದ ನರಸಿಂಹ ಗಡ ಎಂಬಲ್ಲಿ ವಾಹನವೊಂದರಲ್ಲಿ ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯರ ಸಹಕಾರದಿಂದ ಪೊಲೀಸರಿಗೊಪ್ಪಿಸಿದ ಘಟನೆ ಆ.17ರಂದು ರಾತ್ರಿ 11.30 ಗಂಟೆ ಸುಮಾರಿಗೆ ನಡೆದಿದೆ.
ಆ.17ರಂದು ಸಂಜೆ ವೇಳೆ ಅನುಮಾನಾಸ್ಪದವಾಗಿ ಎರಡು ವಾಹನಗಳು ತಿರುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರಿಗೆ ಸಂಶಯ ಮೂಡಿತ್ತು. ವಾಹನವೊಂದರಲ್ಲಿ ಸಂಶಯವಾಸ್ಪದವಾಗಿ ಸಂಚರಿಸುತ್ತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ವಾಹನವನ್ನು ನಿಲ್ಲಿಸಲು ಸೂಚಿಸಿದರು.
ಗೋವುಗಳನ್ನು ಸಾಗಿಸುತ್ತಿದ್ದ ಚಾಲಕ ತಪ್ಪಿಸಿಕೊಳ್ಳಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ. ಪೊಲೀಸರ ಮೇಲೆಯೇ ವಾಹನ ಚಲಾಯಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಸ್ಥಳೀಯರ ಸಹಕಾರದಲ್ಲಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಆಗ ಚಾಲಕ ತಪ್ಪಿಸಿಕೊಂಡಿದ್ದು 3 ಮಂದಿ ಆರೋಪಿಗಳ ಸಿಕ್ಕಿಬಿದ್ದಿದ್ದಾರೆ.
ವಾಹನದಲ್ಲಿ ಹಿಂಸಾತ್ಮಕವಾಗಿ ಗುರುವಾಯನಕೆರೆ ಬಳಿಯ ಪಿಲಿಚಂಡಿ ಕಲ್ಲು ಎಂಬಲ್ಲಿಯ ಕಸಾಯಿಖಾನೆಗೆ ಸಾಗಿಸಲು ಯತ್ನಿಸುತ್ತಿದ್ದರು. ಲಾಯಿಲ ಮುಂಡೂರು ಒಳ ರಸ್ತೆಯಲ್ಲಿ ಸಾಗಿಸಲು ಪ್ಲ್ಯಾನ್ ಮಾಡಿದ್ದರು ಎಂದು ತಿಳಿದು ಬಂದಿದೆ.