December 19, 2025

ವಿಟ್ಲ: ಕೋರೆಗೆ ಅಕ್ರಮ ಪ್ರವೇಶಗೈದು ಒಂದು ಲಕ್ಷ ರೂ. ಬೇಡಿಕೆ ಇಟ್ಟ ತಂಡ:
ಹಣ ನೀಡದಿದ್ದರೆ ಕತ್ತಿಯಿಂದ ಕಡಿದು ಕೊಲೆ ಮಾಡುವುದಾಗಿ ಬೆದರಿಕೆ

0
images-73.jpeg

ವಿಟ್ಲ: ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡ ಕೋರೆ ನೋಡಿಕೊಳ್ಳುತ್ತಿರುವ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳ ನಡೆದಿದೆ.

ಕರೋಪಾಡಿ ಗ್ರಾಮದ ಎಡಂಬಳ ನಿವಾಸಿ ಯು ಕೆ ಅಬ್ದುಲ್ ಖಾದರ್ ನೀಡಿದ ದೂರಿನಂತೆ ಅಹಮ್ಮದ್ ನಿಝಾರ್ ಮತ್ತು ಶರಿಫ್ ಅವರು ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯು ಕೆ ಅಬ್ದುಲ್ ಖಾದರ್ ಅವರ ಮಾವ ಎ ಎಂ ಇಸ್ಮಾಯಿಲ್ ರವರ ಅವರ ಮಾಲಕತ್ವದ ಒಂದು ಕಲ್ಲಿನ ಕೋರೆ ಇದ್ದು, ಈ ಕೋರೆಯ ಉಸ್ತುವಾರಿಯನ್ನು ಯು ಕೆ ಅಬ್ದುಲ್ ಖಾದರ್ ಅವರು ಸುಮಾರು 5 ವರ್ಷದಿಂದ ನೋಡಿಕೊಳ್ಳುತ್ತಿದ್ದಾರೆ.

ಯು ಕೆ ಅಬ್ದುಲ್ ಖಾದರ್ ಸಂಜೆ 4 ಕೋರೆಯ ರೂಮ್‌ನಲ್ಲಿ ಇರುವ ಸಮಯ ಒಂದು ಪಿಕಪ್ ನಲ್ಲಿ ಬಂದ ಪರಿಚಯದ ಅಹಮ್ಮದ್ ನಿಝಾರ್ ಮತ್ತು ಶರಿಫ್ ಎಂಬವರುಗಳು ಏಕಾಏಕಿಯಾಗಿ ಯು ಕೆ ಅಬ್ದುಲ್ ಖಾದರ್ ಇರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಕತ್ತಿಯನ್ನು ಹಿಡಿದುಕೊಂಡು ಬಂದು ನಮಗೆ ನೀನು ಒಂದು ಲಕ್ಷ ಹಣ ನೀಡಬೇಕು ಇಲ್ಲವಾದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಅದಕ್ಕೆ ಹಣ ಯಾಕೆ ನೀಡಬೇಕೆ ಎಂದು ಖಾದರ್ ಆಕ್ಷೇಪಿಸಿದಕ್ಕೆ ಅವರು ಕೈಯಲ್ಲಿ ಹಿಡಿದುಕೊಂಡು ಬಂದಿದ್ದ ಕತ್ತಿಯನ್ನು ತೋರಿಸಿ ನೀನು ನಮಗೆ ಹಣ ನೀಡದಿದ್ದರೆ ನಿನ್ನನ್ನು ಇದೆ ಕತ್ತಿಯಿಂದ ಕೊಲ್ಲುವುದಾಗಿ ಬೆದರಿಕೆ ಹಾಕಿದಾಗ ಆ ಸಮಯ ಬೊಬ್ಬೆ ಹಾಕಿದಾಗ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಕೀರ್ತಿ ಭಟ್ ರಕ್ಷಣೆಗೆ ಬಂದಾಗ ಕೀರ್ತಿಭಟ್‌ರವರ ಕುತ್ತಿಗೆಯ ಬಳಿ ಕತ್ತಿಯನ್ನಿಟ್ಟು ನಮಗೆ ಹಣ ನೀಡದೆ ಕೋರೆಯನ್ನು ನಡೆಸಿದರೆ ನಿನ್ನನ್ನು ಕೂಡಾ ಕೊಲ್ಲದೆ ಬಿಡುವುದಿಲ್ಲವಾಗಿ ಬೆದರಿಕೆ ಹಾಕಿದ್ದಾರೆ. ಆ ಸಮಯಕ್ಕೆ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಪವಾಝ್ ಹಾಗೂ ಇತರ ಜನರು ಬಳಿಗೆ ಬರುವುದನ್ನು ಕಂಡು ಪಿಕಪ್ ವಾಹನ ಬಿಟ್ಟು ಓಡಿ ಪರಾರಿಯಾಗಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!