ವಿಟ್ಲ: ದ್ವಿಚಕ್ರ ವಾಹನ ಅಪಘಾತ: ಸಹಸವಾರ ಮೃತ್ಯು
ವಿಟ್ಲ: ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ ಸಹ ಸವಾರ ಸಾವನ್ನಪ್ಪಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರುನಲ್ಲಿ ನಡೆದಿದೆ.
ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ ಶೇಖ(50) ಮೃತ ದುರ್ದೈವಿ.
ವಿಟ್ಲದ ಕುಡ್ತಮುಗೇರು ಸಮೀಪ ಬೈಕ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ದ್ವಿಚಕ್ರ ವಾಹನದ ಸಹ ಸವಾರ ವಿಕಲಚೇತನರಾದ ಚಂದ್ರಹಾಸ ಶೇಖ ರವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ