AAP ಪಕ್ಷದ 40 ಶಾಸಕರಿಗೆ ಬಿಜೆಪಿ ತಲಾ 800 ಕೋಟಿ ರೂ. ಕೋಟಿ ಆಮಿಷವೊಡ್ಡಿದ BJP
ನವದೆಹಲಿ: ದೆಹಲಿಯ ಎಎಪಿ ಪಕ್ಷದ 40 ಶಾಸಕರಿಗೆ ಬಿಜೆಪಿ ತಲಾ ₹20 ಕೋಟಿ ಆಮಿಷ ಒಡ್ಡಿದೆ ಎಂದು ಗಂಭೀರ ಆರೋಪವನ್ನು ಮಾಡಲಾಗಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ದೂರಲಾಗಿದೆ.
40 ಶಾಸಕರನ್ನು ಮಾತ್ರವಲ್ಲ, ಪಕ್ಷದ ಎಲ್ಲ 62 ಶಾಸಕರನ್ನು ಸೆಳೆಯುವ ಯತ್ನವನ್ನು ಬಿಜೆಪಿ ಮಾಡಿದೆ ಎಂದು ಎಎಪಿ ಆರೋಪಿಸಿದೆ.
ಸಭೆಯು ಕೆಲವೇ ನಿಮಿಷಗಳಲ್ಲಿ ಮುಕ್ತಾಯಗೊಂಡಿದ್ದು, ಕೇಜ್ರಿವಾಲ್ ಸೇರಿದಂತೆ ಒಟ್ಟು 53 ಶಾಸಕರು ಉಪಸ್ಥಿತರಿದ್ದರು. ಸಚಿವ ಸತ್ಯೇಂದ್ರ ಜೈನ್ ಜೈಲಿನಲ್ಲಿರುವುದರಿಂದ ಸಭೆಗೆ ಗೈರಾಗಿದ್ದರು. ಉಳಿದಂತೆ 7 ಶಾಸಕರು ಸಭೆಯಿಂದ ಹೊರಗೆ ಉಳಿದಿದ್ದರು. ಈ ಪೈಕಿ ಓಕ್ಲಾ ಶಾಸಕ ಅಮಾನತುಲ್ಲಾ ಖಾನ್ ಅವರು ದೂರವಾಣಿ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಹೇಳಿದ್ದಾರೆ.




