ಕಾಂಗ್ರೆಸ್ ಅವನತಿಗೆ ರಾಹುಲ್ ಗಾಂಧಿ ಕಾರಣ: ಗುಲಾಂ ನಬಿ ಆಜಾದ್
ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಆಜಾದ್ ಅವರು ಸೋನಿಯಾ ಗಾಂಧಿಗೆ ಬರೆದಿರುವ 5 ಪುಟಗಳ ರಾಜೀನಾಮೆ ಪತ್ರದಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಿದ್ದೀರಿ ಮತ್ತು ಅನನುಭವಿ ನಾಯಕನ ಕೈಗೆ ಕಾಂಗ್ರೆಸ್ ನಾಯಕತ್ವ ವಹಿಸಲು ಶ್ರಮಿಸುತ್ತಿರುವುದು ಪಕ್ಷವನ್ನು ಬಿಡಲು ಪ್ರಮುಖ ಕಾರಣವಾಗಿದೆ.




