December 16, 2025

ಪುತ್ತೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಢಿಕ್ಕಿ, ಬಂಟ್ವಾಳದ ಯುವಕ ಮೃತ್ಯು

0
image_editor_output_image-1872674348-1661839380872.jpg

ಪುತ್ತೂರು: ಕುಪ್ಪೆಟ್ಟಿಯಲ್ಲಿ ಆ.29ರಂದು ಸೋಮವಾರ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೋರ್ವ ಮೃತಪಟ್ಟಿದ್ದಾರೆ.

ಮೃತರನ್ನು ಬಂಟ್ವಾಳ ತಾಲೂಕಿನ ಉಳಿಗ್ರಾಮದ ಖಂಡಿಗ ಮನೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ಸಫ್ವಾನ್ (18) ಎಂದು ಗುರುತಿಸಲಾಗಿದೆ.

ಸಫ್ವಾನ್ ತನ್ನ ತಂದೆಯನ್ನು ಕುಪ್ಪೆಟ್ಟಿಯಲ್ಲಿನ ತನ್ನ ಕೆಲಸದ ಸ್ಥಳಕ್ಕೆ ಇಳಿಸಿ ಪುಂಜಾಲಕಟ್ಟೆಯತ್ತ ಧಾವಿಸುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟು ಬಸ್‌ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಅಪಘಾತಕ್ಕೆ ಕಾರಣರಾದ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೆಳ್ತಂಗಡಿಯಲ್ಲಿ ಪೊಲೀಸರು ಟಿಪ್ಪರ್ ಜಪ್ತಿ ಮಾಡಿದ್ದಾರೆ.

ಸಫ್ವಾನ್ ಪುತ್ತೂರಿನ ಐಟಿಐ ವಿದ್ಯಾರ್ಥಿಯಾಗಿದ್ದು, ಈ ಸಂಬಂಧ ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!